ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹುಣಸೂರು ಕ್ಷೇತ್ರದಿಂದ ನನ್ನ ಮಗ ಹರೀಶ್ಗೌಡನಿಗೆ ಟಿಕೆಟ್ ನೀಡಲಿಲ್ಲ. ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗಿ ಆತ ಭೇಟಿ ಮಾಡಿದಾಗ ಎಚ್.ಡಿ.ಕುಮಾರಸ್ವಾಮಿ ಸರಿಯಾಗಿ ಸ್ಪಂದಿಸಲಿಲ್ಲ. ಪಾಲಿಕೆ ಚುನಾವಣೆ ಟಿಕೆಟ್ ಹಂಚಿಕೆ ಕುರಿತು ನನ್ನೊಂದಿಗೆ ಆಡಿದ ಮಾತುಗಳನ್ನು ಹೇಳಲಾರೆ. ಪ್ರತಿ ಹಂತದಲ್ಲೂನನಗೆ ಅವಮಾನವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.