’ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಜೊತೆಗೆ ಸಾವಿನ ಸಂಖ್ಯೆಯೂ ಏರುತ್ತಿದೆ. ಹೀಗಾಗಿ, ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಮತ್ತು ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪರಿಸ್ಥಿತಿ ಕೈ ಮೀರುವ ಹಂತಕ್ಕೆ ತಲುಪಿದ್ದು, ಅತ್ಯಂತ ಕಠಿಣ ಕ್ರಮಗಳ ತೆಗೆದುಕೊಳ್ಳಬೇಕಾದ ಬಗ್ಗೆ ಚರ್ಚೆ ನಡೆದಿದೆ. ಈ ಕಾರಣಕ್ಕೆ ಮಾರ್ಗಸೂಚಿಯನ್ನು ಈಗಾಗಲೇ ಪರಿಷ್ಕರಿಸಿ, ಸಿದ್ಧಪಡಿಸಲಾಗಿದೆ. ಈ ಪರಿಷ್ಕೃತ ಮಾರ್ಗಸೂಚಿ ಬಗ್ಗೆ ಚರ್ಚೆ ನಡೆದು, ಅಂತಿಮಗೊಳಿಸಲಾಗುವುದು’ ಎಂದೂ ಹೇಳಿದರು.