ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಚುನಾವಣೆ ರಾಜ್ಯಕ್ಕೆ ದಿಕ್ಸೂಚಿ ಅಲ್ಲ: ಸಿದ್ದರಾಮಯ್ಯ

Last Updated 7 ಡಿಸೆಂಬರ್ 2022, 2:37 IST
ಅಕ್ಷರ ಗಾತ್ರ

ಬೆಂಗಳೂರು: ಗುಜರಾತ್ ಚುನಾವಣೆ ಕರ್ನಾಟಕಕ್ಕೆ ದಿಕ್ಸೂಚಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಗುಜರಾತ್ ಫಲಿತಾಂಶಗಳು ಸೂಚಕವಾಗಿದ್ದರೆ, ಹಿಮಾಚಲ ಪ್ರದೇಶ ಏನು? ಪಂಜಾಬ್ ಬಗ್ಗೆ ಏನು ಎಂದು ಪ್ರಶ್ನಿಸಿದ ಅವರು, ಒಂದು ರಾಜ್ಯದ ಚುನಾವಣೆಗೂ ಇನ್ನೊಂದು ರಾಜ್ಯಕ್ಕೂ ಸಂಬಂಧವಿಲ್ಲ. ಸಮಸ್ಯೆಗಳು, ಆಡಳಿತ ಮತ್ತು ಜನರ ಭಾವನೆಗಳು ವಿಭಿನ್ನವಾಗಿರುತ್ತವೆ ಎಂದು ಪ್ರತಿಪಾದಿಸಿದರು.

ಅಂತೆಯೇ, ರಾಷ್ಟ್ರೀಯ ಚುನಾವಣೆ ರಾಜ್ಯ ಚುನಾವಣೆಗಿಂತ ಭಿನ್ನವಾಗಿರುತ್ತದೆ.‌ ಯಾವುದೇ ಚುನಾವಣೆಯಲ್ಲಿ ಜನರ ಆದೇಶವನ್ನು ಒಪ್ಪಿಕೊಳ್ಳಬೇಕು ಎಂದು ಅವರು ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಕಾಂಗ್ರೆಸ್ಸಿನ ಮತಗಳನ್ನು ಸ್ವಲ್ಪ ಮಟ್ಟಿಗೆ ಕಬಳಿಸುತ್ತಿದೆ ಎಂದು
ಒಪ್ಪಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT