ಜ. 27ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ‘ಪುರುಷೋತ್ತಮ ಸನ್ಮಾನ’ ಕಾರ್ಯಕ್ರಮ ನಡೆಯಲಿದೆ. ಸಾವಯವ ಕೃಷಿಯಲ್ಲಿ ಸಾಧನೆ ಮಾಡುವ ರೈತರನ್ನು ಗುರುತಿಸಿ ಪ್ರತಿಷ್ಠಾನವು ರಾಷ್ಟ್ರ ಮಟ್ಟದಲ್ಲಿ ಪುರಸ್ಕಾರ ನೀಡಿ ಗೌರವಿಸುತ್ತಿದೆ. ಮರುಭೂಮಿ ಯಾಗಿರುವ ಕಛ್ ಪ್ರದೇಶದ ಗಾಂಧಿಧಾಮ್ ಜಿಲ್ಲೆಯ ಅಂಜರ್ ತಾಲ್ಲೂಕಿನ ನಿಂಗಲ್ ಗ್ರಾಮದಲ್ಲಿ ವೈವಿಧ್ಯಮಯ ಬೆಳೆಗಳನ್ನು ಬೆಳೆದು ಸಾಧನೆ ಮಾಡಿರುವ ಮಗನ್ಭಾಯ್ ಅವರನ್ನು ಈ ವರ್ಷ ಸನ್ಮಾನಿಸಲಾಗುತ್ತಿದೆ.