ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪುರುಷೋತ್ತಮ ಸನ್ಮಾನ’ಕ್ಕೆ ಗುಜರಾತ್‌ನ ಮಗನ್‌ಭಾಯ್‌ ಆಯ್ಕೆ

Last Updated 24 ಜನವರಿ 2023, 21:48 IST
ಅಕ್ಷರ ಗಾತ್ರ

ಶಿವಮೊಗ್ಗ: ತೀರ್ಥಹಳ್ಳಿಯ ಪುರುಷೋತ್ತಮರಾವ್‌ ಕೃಷಿ ಸಂಶೋಧನಾ ಪ್ರತಿಷ್ಠಾನದಿಂದ ಸಾವಯವ ಕೃಷಿಕ ಪುರುಷೋತ್ತಮ ರಾಯರು ಹಾಗೂ ಶಾಂತಾ ದಂಪತಿಯ ನೆನಪಿನಲ್ಲಿ ನೀಡುವ ‘ಪುರುಷೋತ್ತಮ ಸನ್ಮಾನ’ಕ್ಕೆ ಈ ಬಾರಿ ಗುಜರಾತ್‌ನ ರೈತ ಮಗನ್‌ಭಾಯ್ ಹಮೀರ್‌ಭಾಯ್‌ ಆಯ್ಕೆಯಾಗಿದ್ದಾರೆ.

ಜ. 27ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ‘ಪುರುಷೋತ್ತಮ ಸನ್ಮಾನ’ ಕಾರ್ಯಕ್ರಮ ನಡೆಯಲಿದೆ. ಸಾವಯವ ಕೃಷಿಯಲ್ಲಿ ಸಾಧನೆ ಮಾಡುವ ರೈತರನ್ನು ಗುರುತಿಸಿ ಪ್ರತಿಷ್ಠಾನವು ರಾಷ್ಟ್ರ ಮಟ್ಟದಲ್ಲಿ ಪುರಸ್ಕಾರ ನೀಡಿ ಗೌರವಿಸುತ್ತಿದೆ. ಮರುಭೂಮಿ ಯಾಗಿರುವ ಕಛ್‌ ಪ್ರದೇಶದ ಗಾಂಧಿಧಾಮ್ ಜಿಲ್ಲೆಯ ಅಂಜರ್ ತಾಲ್ಲೂಕಿನ ನಿಂಗಲ್ ಗ್ರಾಮದಲ್ಲಿ ವೈವಿಧ್ಯಮಯ ಬೆಳೆಗಳನ್ನು ಬೆಳೆದು ಸಾಧನೆ ಮಾಡಿರುವ ಮಗನ್‌ಭಾಯ್‌ ಅವರನ್ನು ಈ ವರ್ಷ ಸನ್ಮಾನಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT