ಬಂಧನ ಏಕಿಲ್ಲ:‘46 ಸಾವಿರ ಠೇವಣಿದಾರರನ್ನು ವಂಚಿಸಲಾಗಿದೆ. ಜಾಸ್ತಿ ಬಡ್ಡಿ ಸಿಗುತ್ತದೆ ಎಂಬ ಕಾರಣಕ್ಕೆ ಬೇರೆ ಬೇರೆ ಸಹಕಾರ ಬ್ಯಾಂಕ್ನವರೂ ಈ ಬ್ಯಾಂಕ್ನಲ್ಲಿ ಠೇವಣಿ ಇಟ್ಟಿದ್ದಾರೆ. ಕೇವಲ 24 ಜನರಿಗೆ ₹1,500 ಕೋಟಿಗೂ ಹೆಚ್ಚು ಸಾಲ ವಿತರಿಸಲಾಗಿದೆ. ಆದರೆ, ಈ ಬಗ್ಗೆ ಬ್ಯಾಂಕ್ನಲ್ಲಿ ದಾಖಲೆಗಳೇ ಇಲ್ಲ ಎನ್ನುತ್ತಿದ್ದಾರೆ. ಈ ಹಗರಣದಲ್ಲಿ ಸರ್ಕಾರದ ಪಾತ್ರವೂ ಇರಬಹುದು ಎಂಬ ಅನುಮಾನ ಮೂಡುತ್ತಿದೆ‘ ಎಂದು ಯು.ಬಿ. ವೆಂಕಟೇಶ್ ಹೇಳಿದರು.