ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್ ಪಾಟೀಲ ಆತ್ಮಹತ್ಯೆ ಹಿಂದೆ ರಾಜಕೀಯ ಬಣ್ಣ: ಎಚ್.ಡಿ.ದೇವೇಗೌಡ

Last Updated 14 ಏಪ್ರಿಲ್ 2022, 19:02 IST
ಅಕ್ಷರ ಗಾತ್ರ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಹಿಂದೆ ರಾಜಕೀಯ ಬಣ್ಣವಿದ್ದಂತೆ ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಈ ಪ್ರಕರಣದ ವಿಚಾರದಲ್ಲಿ ಯಾರೆಲ್ಲ ಏನೇನು ಹೇಳಿದ್ದಾರೆ ಎಂಬುದು ಗೊತ್ತಿದೆ. ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ’ ಎಂದರು.

‘ನಾನು ಕೂಡ ಆಡಳಿತ ನಡೆಸಿದ್ದೇನೆ. ಯಾರ ಕಾಲದಲ್ಲಿ ಏನಾಗಿದೆ, ಎಷ್ಟು ಲಂಚ ಪಡೆದು ಸರ್ಕಾರ ನಡೆಸಿದ್ದಾರೆ ಎಂಬುದರ ಬಗ್ಗೆ ಈಗ ಮಾತನಾಡುವುದಿಲ್ಲಘಿ. ಈ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತೂ ಪ್ರತಿಕ್ರಿಯಿಸುವುದಿಲ್ಲ. ಶೇಕಡ 40ರಷ್ಟು ಲಂಚದ ಆರೋಪದ ಕುರಿತು ಮಾತನಾಡುವ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಇಲ್ಲ’ ಎಂದು ಹೇಳಿದರು.

ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗುತ್ತಾರೆ. ಈಗ ಅಧ್ಯಕ್ಷರಾಗಿರುವ ಎಚ್.ಕೆ. ಕುಮಾರಸ್ವಾಮಿ ಅವರು ಸಂಸದೀಯ ಮಂಡಳಿ ಅಧ್ಯಕ್ಷರಾಗುತ್ತಾರೆ. ಇಬ್ಬರೂ ಜತೆಯಾಗಿ ಪಕ್ಷದ ಕೆಲಸ ಮಾಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT