<p><strong>ಬೆಂಗಳೂರು</strong>: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಹಿಂದೆ ರಾಜಕೀಯ ಬಣ್ಣವಿದ್ದಂತೆ ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.</p>.<p>ಪಕ್ಷದ ರಾಜ್ಯ ಕಚೇರಿಯಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಈ ಪ್ರಕರಣದ ವಿಚಾರದಲ್ಲಿ ಯಾರೆಲ್ಲ ಏನೇನು ಹೇಳಿದ್ದಾರೆ ಎಂಬುದು ಗೊತ್ತಿದೆ. ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ’ ಎಂದರು.</p>.<p>‘ನಾನು ಕೂಡ ಆಡಳಿತ ನಡೆಸಿದ್ದೇನೆ. ಯಾರ ಕಾಲದಲ್ಲಿ ಏನಾಗಿದೆ, ಎಷ್ಟು ಲಂಚ ಪಡೆದು ಸರ್ಕಾರ ನಡೆಸಿದ್ದಾರೆ ಎಂಬುದರ ಬಗ್ಗೆ ಈಗ ಮಾತನಾಡುವುದಿಲ್ಲಘಿ. ಈ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತೂ ಪ್ರತಿಕ್ರಿಯಿಸುವುದಿಲ್ಲ. ಶೇಕಡ 40ರಷ್ಟು ಲಂಚದ ಆರೋಪದ ಕುರಿತು ಮಾತನಾಡುವ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಇಲ್ಲ’ ಎಂದು ಹೇಳಿದರು.</p>.<p>ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗುತ್ತಾರೆ. ಈಗ ಅಧ್ಯಕ್ಷರಾಗಿರುವ ಎಚ್.ಕೆ. ಕುಮಾರಸ್ವಾಮಿ ಅವರು ಸಂಸದೀಯ ಮಂಡಳಿ ಅಧ್ಯಕ್ಷರಾಗುತ್ತಾರೆ. ಇಬ್ಬರೂ ಜತೆಯಾಗಿ ಪಕ್ಷದ ಕೆಲಸ ಮಾಡಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಹಿಂದೆ ರಾಜಕೀಯ ಬಣ್ಣವಿದ್ದಂತೆ ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.</p>.<p>ಪಕ್ಷದ ರಾಜ್ಯ ಕಚೇರಿಯಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಈ ಪ್ರಕರಣದ ವಿಚಾರದಲ್ಲಿ ಯಾರೆಲ್ಲ ಏನೇನು ಹೇಳಿದ್ದಾರೆ ಎಂಬುದು ಗೊತ್ತಿದೆ. ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ’ ಎಂದರು.</p>.<p>‘ನಾನು ಕೂಡ ಆಡಳಿತ ನಡೆಸಿದ್ದೇನೆ. ಯಾರ ಕಾಲದಲ್ಲಿ ಏನಾಗಿದೆ, ಎಷ್ಟು ಲಂಚ ಪಡೆದು ಸರ್ಕಾರ ನಡೆಸಿದ್ದಾರೆ ಎಂಬುದರ ಬಗ್ಗೆ ಈಗ ಮಾತನಾಡುವುದಿಲ್ಲಘಿ. ಈ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತೂ ಪ್ರತಿಕ್ರಿಯಿಸುವುದಿಲ್ಲ. ಶೇಕಡ 40ರಷ್ಟು ಲಂಚದ ಆರೋಪದ ಕುರಿತು ಮಾತನಾಡುವ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಇಲ್ಲ’ ಎಂದು ಹೇಳಿದರು.</p>.<p>ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗುತ್ತಾರೆ. ಈಗ ಅಧ್ಯಕ್ಷರಾಗಿರುವ ಎಚ್.ಕೆ. ಕುಮಾರಸ್ವಾಮಿ ಅವರು ಸಂಸದೀಯ ಮಂಡಳಿ ಅಧ್ಯಕ್ಷರಾಗುತ್ತಾರೆ. ಇಬ್ಬರೂ ಜತೆಯಾಗಿ ಪಕ್ಷದ ಕೆಲಸ ಮಾಡಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>