ಕೆಎಂಎಫ್ ಮತ್ತು ಗುಜರಾತ್ನ ಅಮುಲ್ ಸಂಸ್ಥೆಗಳನ್ನು ಒಂದುಗೂಡಿಸಬೇಕು ಎಂಬ ಕೇಂದ್ರ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಟ್ವಿಟರ್ನಲ್ಲಿ ಭಾನುವಾರ ಪ್ರತಿಕ್ರಿಯಿಸಿರುವ ಅವರು, ‘ಅಮುಲ್ ಜತೆ ಕೆಎಂಎಫ್ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಪ್ರಯತ್ನಗಳನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.