ಸರ್ಕಾರ ಅಸ್ತಿತ್ವಕ್ಕೆ ಬರಲು ತಾವು ಕಾರಣರಾಗಿದ್ದು, ತಮ್ಮನ್ನು ಮುಂದುವರಿಸಬೇಕು ಎಂದು ನಾಗೇಶ್ ಪಟ್ಟು ಹಿಡಿದಿದ್ದರು. ಸಚಿವ ಸಂಪುಟ ಸಭೆಯ ಬಳಿಕ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸಚಿವರಾದ ಎಸ್.ಟಿ.ಸೋಮಶೇಖರ್, ಡಾ.ಕೆ. ಸುಧಾಕರ್. ನಾರಾಯಣಗೌಡ ಅವರು, ‘ನಾಗೇಶ್ ರಾಜೀನಾಮೆ ಕೇಳಿರುವುದು ಸರಿಯಲ್ಲ. ಅವರನ್ನು ಮುಂದುವರಿಸಬೇಕು’ ಎಂದು ಮನವಿ ಮಾಡಿದರು. ಅವರ ಮನವಿಗೂ ಮುಖ್ಯಮಂತ್ರಿ ಜಗ್ಗಲಿಲ್ಲ.