‘ಕೋವಿಡ್ ಮೂರನೇ ಅಲೆ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ವೈರಾಣುವಿನ ಆತಂಕ ಎದುರಾಗಿದೆ. ಇಂಥ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಇವರಿಗೆ ಸಲಹೆ ನೀಡಿದವರು ಯಾರು? ಪರೀಕ್ಷೆ ನಡೆಸಲು ಏಕಿಷ್ಟು ಆತುರ? ಮಗುವನ್ನು ನಾಡಿನ ಆಸ್ತಿ ಎನ್ನುತ್ತೇವೆ. ಆದರೆ, ಅಂಥ ಮಕ್ಕಳ ಮೇಲೆ ಈ ಸರ್ಕಾರಕ್ಕೆ ಸ್ವಲ್ಪವೂ ಕಾಳಜಿ ಇಲ್ಲವಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.