<p><strong>ಮೈಸೂರು</strong>: ‘ಸಿದ್ದರಾಮಯ್ಯ ಮತ್ತು ರಮೇಶ್ ಕುಮಾರ್ ಅವರಂತಹ ಕಾಂಗ್ರೆಸ್ ಮುಖಂಡರು ಸಿಎಎ ವಿರುದ್ಧದ ಪ್ರತಿಭಟನೆ ಸಮಯದಲ್ಲಿ ಮಾಡಿದ್ದ ಭಾಷಣದ ಬೆಂಕಿಯ ಉಂಡೆ ಈಗ ಬೆಂಗಳೂರಿನಲ್ಲಿ ಹೊತ್ತಿಕೊಂಡು ಉರಿಯುತ್ತಿದೆ’ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಟೀಕಿಸಿದರು.</p>.<p>‘ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿ, ಸಿಎಎ ಹೋರಾಟದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಭಾಷಣ, ಜನರಿಗೆ ಮಾಡಿರುವ ಪ್ರಚೋದನೆ ಇನ್ನೂ ಬಿಸಿ ಕೆಂಡವಾಗಿಯೇ ಇದೆ. ಅದನ್ನು ಆರಿಸುವ ಗೋಜಿಗೆ ಯಾರೂ ಹೋಗಿಲ್ಲ. ಆ ಕೆಂಡವನ್ನು ಹಿಡಿದು ಮತ್ತೆ ಮತ್ತೆ ರಾಜಕಾರಣ ಮಾಡುವ ಪ್ರಯತ್ನ ಕಾಂಗ್ರೆಸ್ನಿಂದ ನಡೆಯುತ್ತಿದೆ’ ಎಂದು ಆರೋಪಿಸಿದರು.</p>.<p>ಜಮೀರ್ ಖಾನ್ ಅವರಂತಹ ನಾಯಕರು ಗಲಭೆ ಮಾಡಿದವರ ಮನೆಗೆ ತೆರಳಿ ಸಾಂತ್ವನ ಹೇಳುತ್ತಿದ್ದಾರೆ. ಬೆಂಕಿಯಿಂದ ಮನೆ ಕಳೆದುಕೊಂಡ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಯಾರೂ ಹೋಗುತ್ತಿಲ್ಲ. ಕಾಂಗ್ರೆಸ್ ಮಾಡಿದ ಪಾಪದ ಫಲದಿಂದಲೇ ಶಾಸಕರ ಮನೆ ಸುಟ್ಟಿದೆ ಎಂದರು.</p>.<p>ಬೆಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್– ಎಸ್ಡಿಪಿಐ ನಡುವೆ ರಾಜಕೀಯ ನಡೆಯುತ್ತಿದೆ. ಆ ರಾಜಕಾರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸಿದ್ದರಾಮಯ್ಯ ಮತ್ತು ರಮೇಶ್ ಕುಮಾರ್ ಅವರಂತಹ ಕಾಂಗ್ರೆಸ್ ಮುಖಂಡರು ಸಿಎಎ ವಿರುದ್ಧದ ಪ್ರತಿಭಟನೆ ಸಮಯದಲ್ಲಿ ಮಾಡಿದ್ದ ಭಾಷಣದ ಬೆಂಕಿಯ ಉಂಡೆ ಈಗ ಬೆಂಗಳೂರಿನಲ್ಲಿ ಹೊತ್ತಿಕೊಂಡು ಉರಿಯುತ್ತಿದೆ’ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಟೀಕಿಸಿದರು.</p>.<p>‘ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿ, ಸಿಎಎ ಹೋರಾಟದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಭಾಷಣ, ಜನರಿಗೆ ಮಾಡಿರುವ ಪ್ರಚೋದನೆ ಇನ್ನೂ ಬಿಸಿ ಕೆಂಡವಾಗಿಯೇ ಇದೆ. ಅದನ್ನು ಆರಿಸುವ ಗೋಜಿಗೆ ಯಾರೂ ಹೋಗಿಲ್ಲ. ಆ ಕೆಂಡವನ್ನು ಹಿಡಿದು ಮತ್ತೆ ಮತ್ತೆ ರಾಜಕಾರಣ ಮಾಡುವ ಪ್ರಯತ್ನ ಕಾಂಗ್ರೆಸ್ನಿಂದ ನಡೆಯುತ್ತಿದೆ’ ಎಂದು ಆರೋಪಿಸಿದರು.</p>.<p>ಜಮೀರ್ ಖಾನ್ ಅವರಂತಹ ನಾಯಕರು ಗಲಭೆ ಮಾಡಿದವರ ಮನೆಗೆ ತೆರಳಿ ಸಾಂತ್ವನ ಹೇಳುತ್ತಿದ್ದಾರೆ. ಬೆಂಕಿಯಿಂದ ಮನೆ ಕಳೆದುಕೊಂಡ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಯಾರೂ ಹೋಗುತ್ತಿಲ್ಲ. ಕಾಂಗ್ರೆಸ್ ಮಾಡಿದ ಪಾಪದ ಫಲದಿಂದಲೇ ಶಾಸಕರ ಮನೆ ಸುಟ್ಟಿದೆ ಎಂದರು.</p>.<p>ಬೆಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್– ಎಸ್ಡಿಪಿಐ ನಡುವೆ ರಾಜಕೀಯ ನಡೆಯುತ್ತಿದೆ. ಆ ರಾಜಕಾರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>