<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ವಿವಿಧ ಸಮುದಾಯಗಳ ಮೀಸಲಾತಿ ಚಳುವಳಿ, ಹೋರಾಟ ಹೆಚ್ಚಾಗುತ್ತಿದೆ. ಮೇಲ್ವರ್ಗದಿಂದ ಹಿಡಿದು ಎಲ್ಲರೂ ಬೀದಿಗಿಳಿದಿದ್ದಾರೆ. ಮೆರವಣಿಗೆ, ಸತ್ಯಾಗ್ರಹ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಯಾವ ವಿಚಾರದಲ್ಲೂ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ವಿಚಾರವನ್ನು ನಿಭಾಯಿಸಲು ಸರ್ಕಾರ ವಿಫಲವಾಗಿದೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿ ನಡೆಸಿದರು.</p>.<p>ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಮೀಸಲಾತಿ ಕೇಳಲು ಜನತಂತ್ರ ವ್ಯವಸ್ಥೆಯಲ್ಲಿ ಅವಕಾಶವಿದೆ. ಸರ್ಕಾರ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಿಳಿವಳಿಕೆ ನೀಡಬೇಕು. ಕೇವಲ ಮನವಿ ಸ್ವೀಕರಿಸಿದರೆ ಎಲ್ಲವೂ ಮುಗಿಯುವುದಿಲ್ಲ’ ಎಂದರು.</p>.<p>‘ಈಗಲೇ ಮೀಸಲಾತಿ ಘೋಷಿಸುವಂತೆ ಪಂಚಮಸಾಲಿ ಸ್ವಾಮೀಜಿಗಳು ಪಟ್ಟು ಹಿಡಿದಿದ್ದಾರೆ. ಕುರುಬ ಸಮುದಾಯ ಕೂಡ ಮೀಸಲಾತಿ ಕೇಳುತ್ತಿದೆ. ಕುಲಶಾಸ್ತ್ರ ಅಧ್ಯಯನ ಆಗಬೇಕಿದೆ. ಕೇಳಿದ ಕೂಡಲೇ ಕೊಡಲು ಬರುವುದಿಲ್ಲ. ಆದರೆ, ಸರ್ಕಾರ ನಮಗೆ ಸಂಬಂಧವೇ ಇಲ್ಲ ಎಂಬಂತೆ ಸುಮ್ಮನಿದೆ’ ಎಂದರು.</p>.<p>ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾಡಿರುವ ಅರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಂವಿಧಾನದ ಚೌಕಟ್ಟಿನಲ್ಲೇ ಯತ್ನಾಳ್ ಮಾತನಾಡಿದ್ದಾರೆ. ಅವರ ಆರೋಪದಲ್ಲಿ ನ್ಯಾಯವಿದೆ’ ಎಂದರು.</p>.<p>‘ಪಕ್ಷ, ಸರ್ಕಾರದ ವಿರುದ್ಧ ಯತ್ನಾಳ್ ಹೇಳಿಕೆ ನೀಡಿಲ್ಲ. ಜನವಿರೋಧಿ ಭಾಷಣಗಳನ್ನೂ ಮಾಡಿಲ್ಲ. ಸರ್ಕಾರದ ರೀತಿನೀತಿಗಳ ಬಗ್ಗೆ ಹೇಳಿದ್ದಾರೆ. ಮುಖ್ಯಮಂತ್ರಿಗಳ ಕುಟುಂಬ, ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. ಮಂತ್ರಿಗಳ ನಿರಾಸಕ್ತಿ, ಅವರ ನಡವಳಿಕೆ ಬಗ್ಗೆ ಹೇಳಿದ್ದಾರೆ. ವಿರೋಧ ಪಕ್ಷಗಳೇ ಸುಮ್ಮನಾದರೆ ಇನ್ನೇನು ಮಾಡಬೇಕು’ ಎಂದರು.</p>.<p>‘ಸಿದ್ದರಾಮಯ್ಯ, ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ಅವರು ಹೊಂದಾಣಿಕೆಯ ರಾಜಕಾರಣ ಮಾಡುತ್ತಿದ್ದಾರೆ’ ಎಂದೂ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ವಿವಿಧ ಸಮುದಾಯಗಳ ಮೀಸಲಾತಿ ಚಳುವಳಿ, ಹೋರಾಟ ಹೆಚ್ಚಾಗುತ್ತಿದೆ. ಮೇಲ್ವರ್ಗದಿಂದ ಹಿಡಿದು ಎಲ್ಲರೂ ಬೀದಿಗಿಳಿದಿದ್ದಾರೆ. ಮೆರವಣಿಗೆ, ಸತ್ಯಾಗ್ರಹ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಯಾವ ವಿಚಾರದಲ್ಲೂ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ವಿಚಾರವನ್ನು ನಿಭಾಯಿಸಲು ಸರ್ಕಾರ ವಿಫಲವಾಗಿದೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿ ನಡೆಸಿದರು.</p>.<p>ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಮೀಸಲಾತಿ ಕೇಳಲು ಜನತಂತ್ರ ವ್ಯವಸ್ಥೆಯಲ್ಲಿ ಅವಕಾಶವಿದೆ. ಸರ್ಕಾರ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಿಳಿವಳಿಕೆ ನೀಡಬೇಕು. ಕೇವಲ ಮನವಿ ಸ್ವೀಕರಿಸಿದರೆ ಎಲ್ಲವೂ ಮುಗಿಯುವುದಿಲ್ಲ’ ಎಂದರು.</p>.<p>‘ಈಗಲೇ ಮೀಸಲಾತಿ ಘೋಷಿಸುವಂತೆ ಪಂಚಮಸಾಲಿ ಸ್ವಾಮೀಜಿಗಳು ಪಟ್ಟು ಹಿಡಿದಿದ್ದಾರೆ. ಕುರುಬ ಸಮುದಾಯ ಕೂಡ ಮೀಸಲಾತಿ ಕೇಳುತ್ತಿದೆ. ಕುಲಶಾಸ್ತ್ರ ಅಧ್ಯಯನ ಆಗಬೇಕಿದೆ. ಕೇಳಿದ ಕೂಡಲೇ ಕೊಡಲು ಬರುವುದಿಲ್ಲ. ಆದರೆ, ಸರ್ಕಾರ ನಮಗೆ ಸಂಬಂಧವೇ ಇಲ್ಲ ಎಂಬಂತೆ ಸುಮ್ಮನಿದೆ’ ಎಂದರು.</p>.<p>ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾಡಿರುವ ಅರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಂವಿಧಾನದ ಚೌಕಟ್ಟಿನಲ್ಲೇ ಯತ್ನಾಳ್ ಮಾತನಾಡಿದ್ದಾರೆ. ಅವರ ಆರೋಪದಲ್ಲಿ ನ್ಯಾಯವಿದೆ’ ಎಂದರು.</p>.<p>‘ಪಕ್ಷ, ಸರ್ಕಾರದ ವಿರುದ್ಧ ಯತ್ನಾಳ್ ಹೇಳಿಕೆ ನೀಡಿಲ್ಲ. ಜನವಿರೋಧಿ ಭಾಷಣಗಳನ್ನೂ ಮಾಡಿಲ್ಲ. ಸರ್ಕಾರದ ರೀತಿನೀತಿಗಳ ಬಗ್ಗೆ ಹೇಳಿದ್ದಾರೆ. ಮುಖ್ಯಮಂತ್ರಿಗಳ ಕುಟುಂಬ, ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. ಮಂತ್ರಿಗಳ ನಿರಾಸಕ್ತಿ, ಅವರ ನಡವಳಿಕೆ ಬಗ್ಗೆ ಹೇಳಿದ್ದಾರೆ. ವಿರೋಧ ಪಕ್ಷಗಳೇ ಸುಮ್ಮನಾದರೆ ಇನ್ನೇನು ಮಾಡಬೇಕು’ ಎಂದರು.</p>.<p>‘ಸಿದ್ದರಾಮಯ್ಯ, ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ಅವರು ಹೊಂದಾಣಿಕೆಯ ರಾಜಕಾರಣ ಮಾಡುತ್ತಿದ್ದಾರೆ’ ಎಂದೂ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>