‘ಎಚ್3ಎನ್2 ವೈರಾಣುವಿನಿಂದ ದೀರ್ಘಕಾಲ ಕೆಮ್ಮು ಇರಲಿದೆ ಎಂಬ ಮಾಹಿತಿಯಿದೆ. ವೈರಾಣುವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ರಾಜ್ಯದಲ್ಲಿ ಕೈಗೊಳ್ಳಬೇಕಾದ ಹೆಚ್ಚುವರಿ ಕ್ರಮದ ಬಗ್ಗೆ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳ ಜತೆಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಒಂದು ವೇಳೆ ಈ ವೈರಾಣು ಪತ್ತೆಯಾದರೆ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಹೇಗಿರಬೇಕು ಎಂಬ ಬಗ್ಗೆಯೂ ಸಭೆಯ ನಂತರ ಪ್ರಕಟಿಸಲಾಗುವುದು’ ಎಂದು ಹೇಳಿದರು.