ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, ಶ್ರೀಕೃಷ್ಣನನ್ನು ಬಂಧಿಸಿದ್ದರು. ಇಎಂಡಿ ಮೊತ್ತವನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಸಂಬಂಧ ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಿರುವ ಇ.ಡಿ, ಉದಯ ಗ್ರಾಮ ವಿಕಾಸ ಸಂಸ್ಥಾ ಹಾಗೂ ನಿಮ್ಮಿ ಎಂಟರ್ಪ್ರೈಸಸ್ ಜತೆ ನಂಟು ಹೊಂದಿರುವ ಬ್ಯಾಂಕ್ ಖಾತೆಗಳಲ್ಲಿರುವ ₹ 1.44 ಕೋಟಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡಿದೆ.