ವಿಜಯಪುರ:ಹಲಸಂಗಿ ಗೆಳೆಯರ ಪ್ರತಿಷ್ಠಾನದ 2021ನೇ ಸಾಲಿನ ಸಾಹಿತ್ಯ ಸಾಧಕರ ಪ್ರಶಸ್ತಿ ಪ್ರಕಟವಾಗಿದೆ.
ಕಾವ್ಯ ಪ್ರಶಸ್ತಿಗೆ ಸಾಹಿತಿ ಡಾ.ಅರವಿಂದ ಮಾಲಗತ್ತಿ, ವಿಮರ್ಶೆ/ಸಂಶೋಧನಾ ಕ್ಷೇತ್ರದಲ್ಲಿ ಸಾಹಿತಿ ಡಾ.ಬಸವರಾಜ ಕಲ್ಗುಡಿ, ಜಾನಪದ ಕ್ಷೇತ್ರದಲ್ಲಿ ಮಂಗಳೂರಿನ ಡಾ.ಗಾಯತ್ರಿ ನಾವಡ ಆಯ್ಕೆಯಾಗಿದ್ದಾರೆ. ಮೂರು ಪ್ರಶಸ್ತಿಗಳು ತಲಾ ₹ 51 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.
ಯುವ ಪ್ರಶಸ್ತಿಗೆ ಮಹಾರಾಷ್ಟ್ರದ ಜತ್ನ ಮಧು ಬಿರಾದಾರ ಆಯ್ಕೆಯಾಗಿದ್ದು, ಈ ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.
ಡಿ.17ರಂದು ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.