‘ಜಗದೀಶ ಅವರು ಅನೇಕ ಸಕ್ಕರೆ ಕಾರ್ಖಾನೆಗಳನ್ನು ಪುನರುತ್ಥಾನ ಮಾಡಿ, ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಕೃಷ್ಣಪ್ರಸಾದ್ ಅವರು ಬುಡಕಟ್ಟು ಜನ ವಾಸಿಸುವ ಪ್ರದೇಶಗಳು ಸೇರಿದಂತೆ ಹಲವೆಡೆ ಶಿಬಿರಗಳನ್ನು ನಡೆಸಿ ಸಾವಿರಾರು ಜನರಿಗೆ ದೃಷ್ಟಿ ಭಾಗ್ಯ ಕಲ್ಪಿಸಿದ್ದಾರೆ. ನಾಡೋಜ ಸಮಿತಿಯು ಮೂವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿತು. ಈ ಪೈಕಿ ರಾಜ್ಯಪಾಲರು ಇಬ್ಬರ ಹೆಸರಿಗೆ ಅಂಕಿತ ಹಾಕಿದ್ದಾರೆ. ಕನ್ನಡ ನಾಡು, ನುಡಿಗೆ ಸಂಬಂಧಿಸಿದಂತೆ ಯಾರಿಗೆ ಬೇಕಾದರೂ ನಾಡೋಜ ಕೊಡಬಹುದು. ಈ ಹಿಂದೆಯೂ ಸಾಹಿತ್ಯ ಹೊರತುಪಡಿಸಿ ಅನ್ಯ ಕ್ಷೇತ್ರದವರಿಗೆ ನಾಡೋಜ ನೀಡಿರುವ ಸಾಕಷ್ಟು ನಿದರ್ಶನಗಳಿವೆ’ ಎಂದು ಕುಲಪತಿ ಪ್ರೊ. ಸ.ಚಿ. ರಮೇಶ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.