‘ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನೀರಾವರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ಎಸ್ಸಿಪಿ, ಟಿಎಸ್ಪಿ ಯೋಜನೆಗಳ ಹಣವನ್ನು ಸಮಾಜ ಕಲ್ಯಾಣ ಇಲಾಖೆ ವಾಪಸ್ ಪಡೆಯಬೇಕು. ಇದರಿಂದ ಪರಿಶಿಷ್ಟ ಸಮುದಾಯದ ಜನರಿಗೆ ರಸ್ತೆ, ವಸತಿ, ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ, ಹಾಸ್ಟೆಲ್ ಮತ್ತು ನಿರುದ್ಯೋಗಿಗಳಿಗೆ ಸ್ವಯಂ ಉದ್ಯೊಗ ಕೈಗೊಳ್ಳಲು ಸಾಲ, ಸಹಾಯಧನ ಸೌಲಭ್ಯ ಕಲ್ಪಿಸಬಹುದು’ ಎಂದು ಸಲಹೆ ನೀಡಿದ್ದಾರೆ.