‘ಈ ಬಗ್ಗೆ ಅಧ್ಯಯನ, ಸರ್ವೆ ಹಾಗೂ ಉತ್ಖನನ ನಡೆಸಿ 30 ದಿನಗಳ ಒಳಗಾಗಿ ಹೈಕೋರ್ಟ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು. ದೇವಾಲಯದ ಆವರಣದಲ್ಲಿರುವ ಹಿಂದೂ ಸಂಸ್ಕೃತಿ ಹಾಗೂ ಪರಂಪರೆಯ ಕುರುಹುಗಳಾಗಿರುವ ಗರುಡ ಕಂಬ, ಕಲ್ಯಾಣಿ, ಸ್ತೂಪ, ಸ್ತಂಭ, ಹಿಂದೂ ದೇವ-ದೇವತೆಗಳ ಕಲ್ಲಿನ ಕೆತ್ತನೆಗಳು ಹಾಗೂ ಭೂಗತ ದೇವಸ್ಥಾನದ ಭಾಗ, ವಾಸ್ತು ಶಿಲ್ಪ, ಹೂತಿಟ್ಟ ವಿಗ್ರಹಗಳನ್ನು ಸಂರಕ್ಷಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ನಿರ್ದೇಶಿಸಬೇಕು’ ಎಂದೂ ಅವರುಮನವಿ ಮಾಡಿದ್ದಾರೆ.