ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಹರ್ ಘರ್ ತಿರಂಗಾ' ರ‍್ಯಾಲಿ: ಈಶ್ವರಪ್ಪ,  ಸಂಸದ ರಾಘವೇಂದ್ರ ಸ್ಕೂಟರ್ ಸವಾರಿ

Last Updated 8 ಆಗಸ್ಟ್ 2022, 4:03 IST
ಅಕ್ಷರ ಗಾತ್ರ

ಶಿವಮೊಗ್ಗ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿಯಿಂದ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.

ಈ ವೇಳೆ ಈಶ್ವರಪ್ಪ ಸ್ಕೂಟರ್ ಚಲಾಯಿಸಿದರೆ ಸಂಸದ ಬಿ.ವೈ.ರಾಘವೇಂದ್ರ ಹಿಂದೆ ಕುಳಿತು ತ್ರಿವರ್ಣ ಧ್ವಜ ಹಿಡಿದು ಸಾಗಿದರು. ಈಶ್ವರಪ್ಪ ಹೆಲ್ಮೆಟ್ ಧರಿಸದೇ ಸ್ಕೂಟರ್ ಚಲಾಯಿಸಿದ್ದು ವಿಶೇಷವಾಗಿತ್ತು.

ನಗರದ ಎಂಆರ್ ಎಸ್ ವೃತ್ತದಲ್ಲಿ ಸ್ಕೂಟರ್ ರ್ಯಾಲಿಗೆ ಚಾಲನೆ ದೊರೆಯಿತು. ಮಳೆಯ ನಡುವೆಯೇ ಮಹಿಳೆಯರು ಸೇರಿದಂತೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ದ್ವಿಚಕ್ರ ವಾಹನಗಳಲ್ಲಿ ಸಾಗಿಬಂದರು.

ಹರ್ ಘರ್ ತಿರಂಗಾ, ವಂದೇ ಮಾತರಂ, ಭಾರತ್ ಮಾತಾಕಿ ಜೈ ಘೋಷಣೆ ಮೊಳಗಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT