ಶಿವಮೊಗ್ಗ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿಯಿಂದ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.
ಈ ವೇಳೆ ಈಶ್ವರಪ್ಪ ಸ್ಕೂಟರ್ ಚಲಾಯಿಸಿದರೆ ಸಂಸದ ಬಿ.ವೈ.ರಾಘವೇಂದ್ರ ಹಿಂದೆ ಕುಳಿತು ತ್ರಿವರ್ಣ ಧ್ವಜ ಹಿಡಿದು ಸಾಗಿದರು. ಈಶ್ವರಪ್ಪ ಹೆಲ್ಮೆಟ್ ಧರಿಸದೇ ಸ್ಕೂಟರ್ ಚಲಾಯಿಸಿದ್ದು ವಿಶೇಷವಾಗಿತ್ತು.
ನಗರದ ಎಂಆರ್ ಎಸ್ ವೃತ್ತದಲ್ಲಿ ಸ್ಕೂಟರ್ ರ್ಯಾಲಿಗೆ ಚಾಲನೆ ದೊರೆಯಿತು. ಮಳೆಯ ನಡುವೆಯೇ ಮಹಿಳೆಯರು ಸೇರಿದಂತೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ದ್ವಿಚಕ್ರ ವಾಹನಗಳಲ್ಲಿ ಸಾಗಿಬಂದರು.
ಹರ್ ಘರ್ ತಿರಂಗಾ, ವಂದೇ ಮಾತರಂ, ಭಾರತ್ ಮಾತಾಕಿ ಜೈ ಘೋಷಣೆ ಮೊಳಗಿದವು.