ಸೋಮವಾರ ಬೆಳಿಗ್ಗೆ 9.30ಕ್ಕೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉದ್ಯಾನ ವೀಕ್ಷಣೆಗೆ ಚಾಲನೆ ನೀಡಲಿದ್ದಾರೆ. ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಾಜೇಗೌಡ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಂದ್ರಕುಮಾರ್, ಸಹಾಯಕ ಎಂಜಿನಿಯರ್ ನಾಗರಾಜು ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಇಲಾಖಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.