‘ಮಕ್ಕಳಿಗಾಗಿ ಅರಿವು–ನೆರವು ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. 30 ಮಕ್ಕಳ ಆರೈಕೆ ಕೇಂದ್ರಗಳ 480 ಮಕ್ಕಳು ಪಾಲ್ಗೊಂಡಿದ್ದರು. ಮಕ್ಕಳಿಗೆ ಪ್ರಶ್ನಾವಳಿ ನೀಡಲಾಗಿದ್ದು, ಬಳಿಕ ಸಮಾಲೋಚನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಕುಂಪಲದಲ್ಲಿ ಮಕ್ಕಳಿಗೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ’ ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಮಂಗಳವಾರ ತಿಳಿಸಿದರು.