ಬೆಂಗಳೂರು: ‘ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಇತ್ತೀಚೆಗೆ ನಡೆಸಿದ್ದ ಮುಷ್ಕರದ ನಂತರ ಅವರ ಮೇಲೆ ಹಿಂದೆಂದಿಗಿಂತಲೂ ಹೆಚ್ಚು ದಬ್ಬಾಳಿಕೆ ನಡೆಸಲಾಗುತ್ತಿದೆ. ಸಕಾಲದಲ್ಲಿ ವೇತನ ನೀಡದೆ ಸತಾಯಿಸಲಾಗುತ್ತಿದ್ದು, ರಜೆ ಹಾಕುವಂತೆ ಒತ್ತಡ ಹೇರಲಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಸೋಮವಾರ ಆರೋಪಿಸಿದೆ.