ಸ್ಥಳದಲ್ಲಿದ್ದವರು ಈ ದೃಶ್ಯವನ್ನು ವಿಡಿಯೊ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ‘ಸಾಮಾಜಿಕ ಜಾಲತಾಣದಲ್ಲಿ ನಾವಿಬ್ಬರು ಹಿಂದೂ–ಮುಸ್ಲಿಂ ಎಂದು ಬಿಂಬಿಸುತ್ತಿದ್ದಾರೆ. ಆ ಕ್ಷಣದಲ್ಲಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸುವುದಷ್ಟೇ ನನ್ನ ಗುರಿಯಾಗಿತ್ತು. ಆಗ ನಾನು ಅಲ್ಲಿ ಧರ್ಮ ಯಾವುದೆಂದು ನೋಡಲಿಲ್ಲ. ನಮ್ಮಿಬ್ಬರ ಧರ್ಮ ಬೇರೆ ಇರಬಹುದು, ಆದರೆ, ಎಲ್ಲರ ಜೀವವೂ ಒಂದೇ’ ಎಂದು ಸೋಮಶೇಖರ್ ಪ್ರತಿಕ್ರಿಯಿಸಿದರು.