ಆ ಬಳಿಕ, ಉಡುಪಿ ಪೊಲೀಸರು ಭಾರತೀಯ ರಾಯಭಾರ ಕಚೇರಿ ಮೂಲಕ, ಸೌದಿ ಸರ್ಕಾರಕ್ಕೆ ಮಾಹಿತಿ ತಲುಪಿಸಿ, ಬಂಗೇರ ಬಿಡುಗಡೆಗೆ ಮನವಿ ಮಾಡಿದ್ದರು. ಈ ಹಂತದಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಕಮಲಪಂತ್, ಉಡುಪಿಯ ಸಾಮಾಜಿಕ ಹೋರಾಟಗಾರ ಡಾ.ಬಿ. ರವೀಂದ್ರನಾಥ ಶ್ಯಾನುಭಾಗ್, ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ರಾಜತಾಂತ್ರಿಕ ಅಧಿಕಾರಿಗಳಾದ ದೇಶ್ಬಂಧು ಬಟ್ಟಿ ಹಾಗೂ ಸುನೀಲ್ ನೆರವಾಗಿದ್ದರು.