ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೇಗ ಭಾಷಣ ಮುಗಿಸಿ ಸಚಿವರು ನಿರ್ಗಮಿಸಿದರು. ನಂತರ ಮಾತನಾಡಿದ ಅನಿತಾ, ಸಚಿವರ ವಿರುದ್ಧ ಅಸಮಾಧಾನ ಹೊರ ಹಾಕಿದರು. ‘ನಾನು ಬರುವ ಮುಂಚೆಯೇ ಬೇಕಂತಲೇ ಕಾರ್ಯಕ್ರಮ ಉದ್ಘಾಟಿಸಿ ಅವಮಾನ ಮಾಡಿದ್ದಾರೆ. ಹಾರೋಹಳ್ಳಿ ತಾಲ್ಲೂಕು ಮಾಡಿದ್ದು ತಮ್ಮ ಸರ್ಕಾರ ಎಂದು ಸಚಿವರು ಸುಳ್ಳು ಹೇಳಿದ್ದಾರೆ. ಇದರಲ್ಲಿ ಕುಮಾರಸ್ವಾಮಿ ಹಾಗೂ ನನ್ನ ಪರಿಶ್ರಮವಿದೆ. ಕುಮಾರಸ್ವಾಮಿ ಅವರು ಬಂದಿದ್ದರೆ ಇವರೆಲ್ಲ ಹೀಗೆ ಮಾತನಾಡುತ್ತಿರಲಿಲ್ಲ’ ಎಂದು ತರಾಟೆಗೆ ತೆಗೆದುಕೊಂಡರು.