ತಾಲ್ಲೂಕಿನ ನಿಡೂಡಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದ ಅವರು, ನಗರದ ವಿಜಯನಗರ ಬಡಾವಣೆಗೆ ಭೇಟಿ ನೀಡಿದ್ದರು. ಆದರೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಈ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ‘ಟಿಕೆಟ್ ಕುರಿತು ಪಕ್ಷದ ಮುಖಂಡರು ತೀರ್ಮಾನಿಸುತ್ತಾರೆ. ಸ್ವರೂಪ್ ಅವರಿಗೇ ಟಿಕೆಟ್ ಕೊಡುವ ಬಗ್ಗೆ ಮಾಹಿತಿ ಇಲ್ಲ’ ಎಂದರು.