ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾರ್ಚ್ 23ರಂದು ನಡೆದ ಕಾರ್ಯಕ್ರಮದಲ್ಲಿ ನಲಪಾಡ್ ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಕಡೂರು ತಾಲ್ಲೂಕು ಹಸ್ತಿನಾಪುರದ ಎಚ್.ಬಿ.ಪ್ರದೀಪ್ ನಾಯಕ್ ಸಖರಾಯಪಟ್ಟಣ ದೂರು ನೀಡಿದ್ದರು. ಆದರೆ, ಪೊಲೀಸರು ಎಫ್ಐಆರ್ ದಾಖಲಿಸಿಲ್ಲ ಎಂದು ಕೋರ್ಟ್ ಮೆಟ್ಟಿಲೇರಿದ್ದರು. ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕಡೂರು ಜೆಎಂಎಫ್ಸಿ ನ್ಯಾಯಾಲಯ ಆದೇಶ ನೀಡಿತ್ತು ಎಂದು ಪ್ರದೀಪ್ ಪರ ವಕೀಲ ರಾಜಣ್ಣ ತಿಳಿಸಿದರು.