ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಶಾಸಕ ಕೆ.‌ ಶ್ರೀನಿವಾಸಗೌಡ ವಿರುದ್ಧ ಕ್ರಮ: ಎಚ್.ಡಿ.‌ದೇವೇಗೌಡ

Last Updated 7 ಸೆಪ್ಟೆಂಬರ್ 2021, 9:55 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಮುಖಂಡರ ಜತೆ ಸೇರಿಕೊಂಡು ಜೆಡಿಎಸ್ ಪಕ್ಷಕ್ಕೆ ಹಾನಿಯಾಗುವಂತೆ ಮಾತನಾಡುತ್ತಿರುವ ಕೋಲಾರ ಶಾಸಕ ಕೆ.‌ಶ್ರೀನಿವಾಸ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಕೋಲಾರ ಶಾಸಕರ ವಿಚಾರದಲ್ಲಿ ಇನ್ನು ಸಹಿಸಲು ಆಗುವುದಿಲ್ಲ. ನೇರವಾಗಿ ಪಕ್ಷಕ್ಕೆ ಹಾನಿಯಾಗುವ ರೀತಿಯಲ್ಲಿ ಅವರು ಮಾತನಾಡುತ್ತಿದ್ದಾರೆ. ಸೂಕ್ತ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚಿಸಿದ್ದೇನೆ' ಎಂದರು.

ಶಾಸಕ ಜಿ.ಟಿ. ದೇವೇಗೌಡ ಅವರು ಕೂಡ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ. ತಮಗೆ ಹಾಗೂ ಮಗನಿಗೆ ಟಿಕೆಟ್ ನೀಡುವಂತೆ ಸಿದ್ದರಾಮಯ್ಯ ಬಳಿ ಕೇಳಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಅವರು ಪಕ್ಷಕ್ಕೆ ಹಾನಿಯಾಗುವ ರೀತಿಯಲ್ಲಿ ಎಲ್ಲಿಯೂ ಮಾತನಾಡಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾವ ಸದ್ಯಕ್ಕೆ ಇಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT