<p><strong>ಬೆಂಗಳೂರು:</strong> ಶಾಸಕರೊಬ್ಬರ ಮನೆಗೆ ನುಗ್ಗಿ ಗಲಾಟೆ ಮಾಡಿ, ಬೆಂಕಿ ಹಾಕಿ ನಾಶ ಮಾಡಿದ್ದು ರಾಜ್ಯ ಇತಿಹಾಸದಲ್ಲೇ ಮೊದಲು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆಘಾತ ವ್ಯಕ್ತಪಡಿಸಿದರು.</p>.<p>ಹಿಂದೆಂದೂ ಇಂತಹ ಘಟನೆ ನಡೆದಿರಲಿಲ್ಲ. ಶಾಸಕರ ಮನೆಗೆ ನುಗ್ಗಿ ಗಲಾಟೆ ಮಾಡಿದ್ದು ತಪ್ಪು. ಆದ್ದರಿಂದ ತಪ್ಪಿತಸ್ಥರನ್ನು ಕಠಿಣವಾಗಿ ಶಿಕ್ಷಿಸಬೇಕು ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಶ್ರೀನಿವಾಸಮೂರ್ತಿ ಹಿಂದೆ ನಮ್ಮ ಪಕ್ಷದಲ್ಲಿದ್ದವರು. ಯಾವುದೇ ಪಕ್ಷದ ಶಾಸಕ ಇರಲಿ, ಇಂತಹ ಘಟನೆ ನಡೆಯಬಾರದು. ಗಲಭೆಯ ವಿಚಾರದಲ್ಲಿ ಕೆಸರೆರಚಾಟವೂ ಸರಿಯಲ್ಲ. ಮನಸ್ಸಿಗೆ ಬಂದಂತೆ ಮಾತನಾಡುವುದೂ ಸರಿಯಲ್ಲ. ಬಿಜೆಪಿ ನಾಯಕರ ಮಾತುಗಳನ್ನೂ ಕೇಳಿದ್ದೇನೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಮಾತನ್ನೂ ಕೇಳಿದ್ದೇನೆ’ ಎಂದು ಹೇಳಿದರು.</p>.<p>‘ಪೊಲೀಸ್ ಅಧಿಕಾರಿಗಳ ಬಗ್ಗೆ ವಿಶ್ವಾಸವಿದೆ. ಅವರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಾಗ ರಾಜಕೀಯ ಪಕ್ಷಗಳು ಮಧ್ಯ ಪ್ರವೇಶ ಮಾಡಬಾರದು. ಸರ್ಕಾರದ ಮುಖ್ಯಸ್ಥರಾಗಿ ಮುಖ್ಯಮಂತ್ರಿಯವರು ಮಾತನಾಡಿದ ಬಳಿಕ ಉಳಿದ ಸಚಿವರು ಮಾತನಾಡುವ ಅವಶ್ಯಕತೆ ಏನಿದೆ’ ಎಂದು ದೇವೇಗೌಡ ಪ್ರಶ್ನಿಸಿದರು.</p>.<p><strong>‘ಕಾಯ್ದೆ ತಿದ್ದುಪಡಿ ವಿರೋಧಿಸಿ ಜೆಡಿಎಸ್ ಹೋರಾಟ’</strong><br /><strong>ಬೆಂಗಳೂರು:</strong> ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.</p>.<p>‘ಈ ತಿದ್ದುಪಡಿಗಳನ್ನು ನಮ್ಮ ಪಕ್ಷ ಕಟುವಾಗಿ ವಿರೋಧಿಸುತ್ತದೆ. ಇದರ ಅಂಗವಾಗಿ ನಾಳೆ ಹಾಸನದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸುತ್ತೇವೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೊರೊನಾ ಇರುವುದರಿಂದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಹೆಚ್ಚು ಜನರನ್ನು ಸೇರಿಸುವುದಿಲ್ಲ. ಪಕ್ಷದ ಕಾರ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕ ಎಚ್.ಡಿ.ರೇವಣ್ಣ ಭಾಗವಹಿಸುತ್ತಾರೆ. ಯಾವುದೇ ಘೋಷಣೆಗಳನ್ನು ಕೂಗದೇ ಜಿಲ್ಲಾಧಿಕಾರಿಯವರಿಗೆ ಪ್ರತಿಭಟನೆಯ ಮನವಿ ಪತ್ರ ಸಲ್ಲಿಸುತ್ತೇವೆ’ ಎಂದು ಹೇಳಿದರು.</p>.<p>‘ವಿವಿಧ ಜಿಲ್ಲಾ ಕೇಂದ್ರಗಳಲ್ಲೂ ಹೋರಾಟ ನಡೆಸಲಾಗುವುದು. ಹೋರಾಟದ ವಿಚಾರದಲ್ಲಿ ಪಕ್ಷದಲ್ಲಿ ಒಡಕಿಲ್ಲ. ಹೋರಾಟದಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸುತ್ತಾರೆ. ಸಂಸತ್ ಅಧಿವೇಶನದಲ್ಲೂ ಈ ವಿಷಯವನ್ನು ಪ್ರಸ್ತಾಪಿಸುತ್ತೇನೆ. ರೈತ ಸಮುದಾಯಕ್ಕೆ ಮಾರಕವಾದ ತಿದ್ದುಪಡಿಗಳನ್ನು ವಾಪಸ್ ಪಡೆಯುವಂತೆಯೂ ಒತ್ತಾಯಿಸಲಾಗುವುದು’ ಎಂದು ದೇವೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಾಸಕರೊಬ್ಬರ ಮನೆಗೆ ನುಗ್ಗಿ ಗಲಾಟೆ ಮಾಡಿ, ಬೆಂಕಿ ಹಾಕಿ ನಾಶ ಮಾಡಿದ್ದು ರಾಜ್ಯ ಇತಿಹಾಸದಲ್ಲೇ ಮೊದಲು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆಘಾತ ವ್ಯಕ್ತಪಡಿಸಿದರು.</p>.<p>ಹಿಂದೆಂದೂ ಇಂತಹ ಘಟನೆ ನಡೆದಿರಲಿಲ್ಲ. ಶಾಸಕರ ಮನೆಗೆ ನುಗ್ಗಿ ಗಲಾಟೆ ಮಾಡಿದ್ದು ತಪ್ಪು. ಆದ್ದರಿಂದ ತಪ್ಪಿತಸ್ಥರನ್ನು ಕಠಿಣವಾಗಿ ಶಿಕ್ಷಿಸಬೇಕು ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಶ್ರೀನಿವಾಸಮೂರ್ತಿ ಹಿಂದೆ ನಮ್ಮ ಪಕ್ಷದಲ್ಲಿದ್ದವರು. ಯಾವುದೇ ಪಕ್ಷದ ಶಾಸಕ ಇರಲಿ, ಇಂತಹ ಘಟನೆ ನಡೆಯಬಾರದು. ಗಲಭೆಯ ವಿಚಾರದಲ್ಲಿ ಕೆಸರೆರಚಾಟವೂ ಸರಿಯಲ್ಲ. ಮನಸ್ಸಿಗೆ ಬಂದಂತೆ ಮಾತನಾಡುವುದೂ ಸರಿಯಲ್ಲ. ಬಿಜೆಪಿ ನಾಯಕರ ಮಾತುಗಳನ್ನೂ ಕೇಳಿದ್ದೇನೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಮಾತನ್ನೂ ಕೇಳಿದ್ದೇನೆ’ ಎಂದು ಹೇಳಿದರು.</p>.<p>‘ಪೊಲೀಸ್ ಅಧಿಕಾರಿಗಳ ಬಗ್ಗೆ ವಿಶ್ವಾಸವಿದೆ. ಅವರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಾಗ ರಾಜಕೀಯ ಪಕ್ಷಗಳು ಮಧ್ಯ ಪ್ರವೇಶ ಮಾಡಬಾರದು. ಸರ್ಕಾರದ ಮುಖ್ಯಸ್ಥರಾಗಿ ಮುಖ್ಯಮಂತ್ರಿಯವರು ಮಾತನಾಡಿದ ಬಳಿಕ ಉಳಿದ ಸಚಿವರು ಮಾತನಾಡುವ ಅವಶ್ಯಕತೆ ಏನಿದೆ’ ಎಂದು ದೇವೇಗೌಡ ಪ್ರಶ್ನಿಸಿದರು.</p>.<p><strong>‘ಕಾಯ್ದೆ ತಿದ್ದುಪಡಿ ವಿರೋಧಿಸಿ ಜೆಡಿಎಸ್ ಹೋರಾಟ’</strong><br /><strong>ಬೆಂಗಳೂರು:</strong> ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.</p>.<p>‘ಈ ತಿದ್ದುಪಡಿಗಳನ್ನು ನಮ್ಮ ಪಕ್ಷ ಕಟುವಾಗಿ ವಿರೋಧಿಸುತ್ತದೆ. ಇದರ ಅಂಗವಾಗಿ ನಾಳೆ ಹಾಸನದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸುತ್ತೇವೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೊರೊನಾ ಇರುವುದರಿಂದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಹೆಚ್ಚು ಜನರನ್ನು ಸೇರಿಸುವುದಿಲ್ಲ. ಪಕ್ಷದ ಕಾರ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕ ಎಚ್.ಡಿ.ರೇವಣ್ಣ ಭಾಗವಹಿಸುತ್ತಾರೆ. ಯಾವುದೇ ಘೋಷಣೆಗಳನ್ನು ಕೂಗದೇ ಜಿಲ್ಲಾಧಿಕಾರಿಯವರಿಗೆ ಪ್ರತಿಭಟನೆಯ ಮನವಿ ಪತ್ರ ಸಲ್ಲಿಸುತ್ತೇವೆ’ ಎಂದು ಹೇಳಿದರು.</p>.<p>‘ವಿವಿಧ ಜಿಲ್ಲಾ ಕೇಂದ್ರಗಳಲ್ಲೂ ಹೋರಾಟ ನಡೆಸಲಾಗುವುದು. ಹೋರಾಟದ ವಿಚಾರದಲ್ಲಿ ಪಕ್ಷದಲ್ಲಿ ಒಡಕಿಲ್ಲ. ಹೋರಾಟದಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸುತ್ತಾರೆ. ಸಂಸತ್ ಅಧಿವೇಶನದಲ್ಲೂ ಈ ವಿಷಯವನ್ನು ಪ್ರಸ್ತಾಪಿಸುತ್ತೇನೆ. ರೈತ ಸಮುದಾಯಕ್ಕೆ ಮಾರಕವಾದ ತಿದ್ದುಪಡಿಗಳನ್ನು ವಾಪಸ್ ಪಡೆಯುವಂತೆಯೂ ಒತ್ತಾಯಿಸಲಾಗುವುದು’ ಎಂದು ದೇವೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>