<p><strong>ಬೆಂಗಳೂರು: </strong>ಕೋವಿಡ್ ಸೋಂಕಿತರಾಗಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.</p>.<p>ಜ್ವರದಿಂದ ಬಳಲುತ್ತಿದ್ದ ಚೆನ್ನಮ್ಮ ಅವರಿಗೆ ಮೊದಲು ಕೋವಿಡ್ ದೃಢಪಟ್ಟಿತ್ತು. ಮಾರ್ಚ್ 30ರಂದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ದೇವೇಗೌಡರಿಗೂ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಮಾ.31ರಂದು ಅವರನ್ನೂ ಅದೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.</p>.<p>ಇಬ್ಬರೂ ಸೋಂಕಿನಿಂದ ಗುಣಮುಖರಾಗಿರುವುದು ಸೋಮವಾರ ನಡೆಸಿದ ಪರೀಕ್ಷೆಯಲ್ಲಿ ಖಚಿತವಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<p>ದೇವೇಗೌಡ ದಂಪತಿ ಆಸ್ಪತ್ರೆಯಿಂದ ನಿರ್ಗಮಿಸುವಾಗ ಮಣಿಪಾಲ ಆಸ್ಪತ್ರೆಗಳ ಸಮೂಹದ ಅಧ್ಯಕ್ಷ ಡಾ.ಸುದರ್ಶನ್ ಬಲ್ಲಾಳ್ ಮತ್ತು ಶ್ವಾಸಕೋಶ, ಉಸಿರಾಟ ಸಂಬಂಧಿ ತಜ್ಞ ಡಾ. ಸತ್ಯನಾರಾಯಣ್ ಮೈಸೂರು ಹಾಜರಿದ್ದು, ಹೂಗುಚ್ಛ ನೀಡಿ ಬೀಳ್ಕೊಟ್ಟರು.</p>.<p>ಮನೆಗೆ ಮರಳಿದ ಬಳಿಕ ತಮಗಾಗಿ ಕಳಕಳಿ ತೋರಿ, ಗುಣಮುಖರಾಗುವಂತೆ ಹಾರೈಸಿದವರಿಗೆ ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿರುವ ದೇವೇಗೌಡ, ಶೀಘ್ರದಲ್ಲಿ ಕ್ರಿಯಾಶೀಲ ಸಾರ್ವಜನಿಕ ಜೀವನಕ್ಕೆ ಮರಳುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಸೋಂಕಿತರಾಗಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.</p>.<p>ಜ್ವರದಿಂದ ಬಳಲುತ್ತಿದ್ದ ಚೆನ್ನಮ್ಮ ಅವರಿಗೆ ಮೊದಲು ಕೋವಿಡ್ ದೃಢಪಟ್ಟಿತ್ತು. ಮಾರ್ಚ್ 30ರಂದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ದೇವೇಗೌಡರಿಗೂ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಮಾ.31ರಂದು ಅವರನ್ನೂ ಅದೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.</p>.<p>ಇಬ್ಬರೂ ಸೋಂಕಿನಿಂದ ಗುಣಮುಖರಾಗಿರುವುದು ಸೋಮವಾರ ನಡೆಸಿದ ಪರೀಕ್ಷೆಯಲ್ಲಿ ಖಚಿತವಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<p>ದೇವೇಗೌಡ ದಂಪತಿ ಆಸ್ಪತ್ರೆಯಿಂದ ನಿರ್ಗಮಿಸುವಾಗ ಮಣಿಪಾಲ ಆಸ್ಪತ್ರೆಗಳ ಸಮೂಹದ ಅಧ್ಯಕ್ಷ ಡಾ.ಸುದರ್ಶನ್ ಬಲ್ಲಾಳ್ ಮತ್ತು ಶ್ವಾಸಕೋಶ, ಉಸಿರಾಟ ಸಂಬಂಧಿ ತಜ್ಞ ಡಾ. ಸತ್ಯನಾರಾಯಣ್ ಮೈಸೂರು ಹಾಜರಿದ್ದು, ಹೂಗುಚ್ಛ ನೀಡಿ ಬೀಳ್ಕೊಟ್ಟರು.</p>.<p>ಮನೆಗೆ ಮರಳಿದ ಬಳಿಕ ತಮಗಾಗಿ ಕಳಕಳಿ ತೋರಿ, ಗುಣಮುಖರಾಗುವಂತೆ ಹಾರೈಸಿದವರಿಗೆ ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿರುವ ದೇವೇಗೌಡ, ಶೀಘ್ರದಲ್ಲಿ ಕ್ರಿಯಾಶೀಲ ಸಾರ್ವಜನಿಕ ಜೀವನಕ್ಕೆ ಮರಳುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>