ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷ್ಕೃತ ಪಠ್ಯ ವಿರೋಧಿಸಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಎಚ್.ಡಿ.‌ ದೇವೇಗೌಡ ಘೋಷಣೆ

Last Updated 18 ಜೂನ್ 2022, 9:44 IST
ಅಕ್ಷರ ಗಾತ್ರ

ಬೆಂಗಳೂರು: ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಘೋಷಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆಯುತ್ತಿರುವ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಈ ಹೋರಾಟ ತಾರ್ಕಿಕ ಅಂತ್ಯಕ್ಕೆ ತಲುಪಬೇಕು. ಹೋರಾಟ ಸಮಿತಿ ಯಾವುದೇ ಸಂದರ್ಭದಲ್ಲಿ ಕರೆದರೂ ಪ್ರತಿಭಟನೆಗೆ ಬರಲು ನಾನು ಸಿದ್ಧ ಎಂದರು.

ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ವಿಚಾರದಲ್ಲಿ ಗೋಕಾಕ್ ಚಳವಳಿ ಒಂದು ಮಾದರಿ. ಆಗ ವರನಟ ರಾಜಕುಮಾರ್ ಹೋರಾಟವನ್ನು ಮುನ್ನಡೆಸಿದ್ದರು. ಈಗ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT