₹30 ಕೋಟಿ ಆಮಿಷ: ಹಿಂದೆ ಸಮ್ಮಿಶ್ರ ಸರ್ಕಾರವನ್ನು ಅಧಿಕಾರದಿಂದ ತೆಗೆಯುವ ವೇಳೆ ಮಾಗಡಿ ಶಾಸಕ ಎ.ಮಂಜುನಾಥ್ ಅವರಿಗೂ ಬಿಜೆಪಿ ₹30 ಕೋಟಿ ಆಮಿಷ ಒಡ್ಡಿತ್ತು. ಆದರೆ ಅವರು ಇದನ್ನು ತಿರಸ್ಕರಿಸಿದ್ದರು. ಇವರನ್ನು ಮತ್ತೊಮ್ಮೆ ನನ್ನ ಜೊತೆ ಕೆಲಸ ಮಾಡಲು ವಿಧಾನಸೌಧಕ್ಕೆ ಕಳುಹಿಸಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು. ಶಾಸಕ ಎ. ಮಂಜುನಾಥ್, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.