ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಹತ್ರಾಸ್ಗೆ ತೆರಳುತ್ತಿದ್ದಾಗ ಗುರುವಾರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಹಿಂಸಾ ಪ್ರತಿಪಾದಕ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನದ ಮುನ್ನ ಇಂದು ಉತ್ತರ ಪ್ರದೇಶ ಪೊಲೀಸರು ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಅಮಾನವೀಯ ವರ್ತನೆ ತೋರಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಪ್ರತಿಭಟನಾ ಅಸ್ತ್ರವನ್ನು ಹಾಡುಹಗಲೇ ದಹಿಸುವ ಯತ್ನ ಎಂದು ಅಭಿಪ್ರಾಯಪಟ್ಟಿದ್ದಾರೆ.