‘ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ನೋಟಿಸ್ ನೀಡಿದ ಬಳಿಕ ಆ ನಿರೂಪಕಿ ಮೂರೂ ರಾಜಕೀಯ ಪಕ್ಷಗಳ ಮುಖಂಡರ ಜತೆ ಚರ್ಚೆ ಮಾಡಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಮಾಜಿ ಮುಖ್ಯಮಂತ್ರಿಯ ಜತೆಗೂ ಚರ್ಚಿಸಿದ್ದಾರೆ ಎಂಬ ಸುದ್ದಿ ಪ್ರಸಾರ ಮಾಡಲಾಗಿದೆ. ರಾಜ್ಯದಲ್ಲಿಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ, ವೀರಪ್ಪ ಮೊಯಿಲಿ, ನಾನು, ಸಿದ್ದರಾಮಯ್ಯ, ಡಿ.ವಿ. ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ಇದ್ದೇವೆ. ನಿರೂಪಕಿಯ ಪ್ರಕರಣದಲ್ಲಿ ಇರುವವರು ಯಾರು ಎಂಬುದನ್ನು ಹೇಳಬೇಕಲ್ಲವೆ’ ಎಂದು ಪ್ರಶ್ನಿಸಿದರು.