ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ₹ 5 ಲಕ್ಷ ಪರಿಹಾರ ನೀಡಿದ ಕುಮಾರಸ್ವಾಮಿ

Last Updated 1 ಆಗಸ್ಟ್ 2022, 7:19 IST
ಅಕ್ಷರ ಗಾತ್ರ

ಸುಳ್ಯ: ಹತ್ಯೆಯಾಗಿರುವ ಪ್ರವೀಣ್ ನೆಟ್ಟಾರು ಅವರ ಮನೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಅವರ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿದರು.

ಕುಮಾರಸ್ವಾಮಿ ಅವರು ಪ್ರವೀಣ್ ಮನೆಯವರಿಗೆ ₹5 ಲಕ್ಷದ ಚೆಕ್ ವಿತರಿಸಿದರು.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಪುತ್ತೂರು ತಾಲ್ಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ, ದಯಾಕರ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ ಸದಾಶಿವ, ಮುಖಂಡರಾದ ಮಹಮ್ಮದ್ ಕುಂಞ, ವಸಂತ ಪೂಜಾರಿ, ರತ್ನಾಕರ ಸುವರ್ಣ, ಪ್ರವೀಣ್ ಚಂದ್ರ ಜೈನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT