ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದಲಿತ ಸಮುದಾಯಕ್ಕೆ ಸೇರಿದ ದಕ್ಷ ಅಧಿಕಾರಿಯಾದ ರವೀಂದ್ರನಾಥ್ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರು. ನಕಲಿ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ದೊಡ್ಡ ತಿಮಿಂಗಲಗಳಿಗೆ ಬಲೆ ಹಾಕಿದ್ದರು. ಸರ್ಕಾರ ಹಾಗೂ ಸಮಾಜಕ್ಕೆ ವಂಚನೆ ಮಾಡಿದ್ದವರ ಜಾತಕ ಬಿಚ್ಚಿಡಲು ಪ್ರಯತ್ನ ಮಾಡುತ್ತಿದ್ದರು ಎಂದು ಹೇಳಿದ್ದಾರೆ.