<p><strong>ಬೆಂಗಳೂರು</strong>: ‘ನಗರದ ಉತ್ತಮ ಭವಿಷ್ಯಕ್ಕೆಂದು ಕೆಂಪೇಗೌಡರು ನಿರ್ಮಿಸಿದ್ದ ಕೆರೆ, ರಾಜಕಾಲುವೆಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದರು.</p>.<p>ಆರ್.ಟಿ. ನಗರದ ಮೈದಾನದಲ್ಲಿ ಆಯೋಜಿಸಿದ್ದ ಕೆಂಪೇಗೌಡರ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಭೂಗಳ್ಳರು ಸಾವಿರಾರು ಕೆರೆಗಳನ್ನು ಸ್ವಾರ್ಥಕ್ಕೆ ನುಂಗಿ ಬೃಹತ್ ಕಟ್ಟಡ ಕಟ್ಟಿಸಿಕೊಂಡು ಮೆರೆಯುತ್ತಿದ್ದಾರೆ ಎಂದು ಹೇಳಿದರು.</p>.<p>’ಜುಲೈ 1ರಿಂದ ನಗರದಲ್ಲಿ ಜನತಾ ಯಾತ್ರೆ ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್ ಮತ್ತು ರಸ್ತೆಗೂ ತಲುಪಲಿದ್ದೇವೆ‘ ಎಂದರು.</p>.<p>ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಸಯ್ಯದ್ ಮೋಹಿದ್ ಅಲ್ತಾಫ್ ಹೆಸರನ್ನುಜೆಡಿಎಸ್ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಘೋಷಿಸಿದರು.</p>.<p>ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಪ್ರಕಾಶ್, ಹೆಬ್ಬಾಳದ ಅಧ್ಯಕ್ಷ ಎಸ್. ರುದ್ರಪ್ಪ, ಹಕೀಂ ಬಾಬು, ರಾಜಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಗರದ ಉತ್ತಮ ಭವಿಷ್ಯಕ್ಕೆಂದು ಕೆಂಪೇಗೌಡರು ನಿರ್ಮಿಸಿದ್ದ ಕೆರೆ, ರಾಜಕಾಲುವೆಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದರು.</p>.<p>ಆರ್.ಟಿ. ನಗರದ ಮೈದಾನದಲ್ಲಿ ಆಯೋಜಿಸಿದ್ದ ಕೆಂಪೇಗೌಡರ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಭೂಗಳ್ಳರು ಸಾವಿರಾರು ಕೆರೆಗಳನ್ನು ಸ್ವಾರ್ಥಕ್ಕೆ ನುಂಗಿ ಬೃಹತ್ ಕಟ್ಟಡ ಕಟ್ಟಿಸಿಕೊಂಡು ಮೆರೆಯುತ್ತಿದ್ದಾರೆ ಎಂದು ಹೇಳಿದರು.</p>.<p>’ಜುಲೈ 1ರಿಂದ ನಗರದಲ್ಲಿ ಜನತಾ ಯಾತ್ರೆ ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್ ಮತ್ತು ರಸ್ತೆಗೂ ತಲುಪಲಿದ್ದೇವೆ‘ ಎಂದರು.</p>.<p>ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಸಯ್ಯದ್ ಮೋಹಿದ್ ಅಲ್ತಾಫ್ ಹೆಸರನ್ನುಜೆಡಿಎಸ್ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಘೋಷಿಸಿದರು.</p>.<p>ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಪ್ರಕಾಶ್, ಹೆಬ್ಬಾಳದ ಅಧ್ಯಕ್ಷ ಎಸ್. ರುದ್ರಪ್ಪ, ಹಕೀಂ ಬಾಬು, ರಾಜಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>