ಬೆಂಗಳೂರು: ‘ಅಶೋಕ ಅವರು ಸಾಮ್ರಾಟರಾಗಿ ಬೆಳೆಯಲು ಕಾರಣವಾದ ‘ಬೆತ್ತಲೆ ಸತ್ಯ’ದ ಹುತ್ತ ಬಿಚ್ಚಿಕೊಂಡಿದ್ದು, ಇದಕ್ಕೇನು ಹೇಳುತ್ತೀರಿ ಸಾಮ್ರಾಟರೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ‘1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಹಾಲಿ ಕಂದಾಯ ಸಚಿವ ಆರ್.ಅಶೋಕ ಅವರು ಸ್ಪರ್ಧಿಸಿದಾಗ ಯಲಹಂಕದಿಂದ ಬಂದಿದ್ದ 1,000 ಕಾರ್ಯಕರ್ತರು ತಲಾ 5ರಿಂದ 10 ಕಳ್ಳವೋಟು ಹಾಕಿ ಅವರನ್ನು ಗೆಲ್ಲಿಸಿದ್ದರು.
ಅಂಥ ಕೃತ್ಯಗಳಿಂದಲೇ ಇಂದು ಬಿಜೆಪಿ ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬಂದಿದೆ ಎಂದು ಮುನಿರಾಜು ತಮ್ಮ ಪಂಚೇಂದ್ರಿಯಗಳ ಸಾಕ್ಷಿಯಾಗಿ ತುಂಬಿದ ಕಾರ್ಯಕರ್ತರ ಸಭೆಯಲ್ಲೇ ಹೇಳಿದ್ದಾರೆ’ ಎಂದಿದ್ದಾರೆ.
2006ರಲ್ಲಿ ಜೆಡಿಎಸ್ ದೆಸೆಯಿಂದ ಅಧಿಕಾರದ ರುಚಿ ಕಂಡ ಬಿಜೆಪಿಗೆ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವುದು ಚಾಳಿ ಆಗಿಬಿಟ್ಟಿದೆ. ಆ ನಂತರ ʼಆಪರೇಷನ್ ಕಮಲʼ ಎಂಬ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ಬಿಜೆಪಿ ಅಭದ್ರಗೊಳಿಸಿದೆ. 1/6#ಬಿಜೆಪಿ_ಮತ್ತು_ಕಳ್ಳವೋಟು#ಕಳ್ಳ_ವೋಟುಗಳ_ಕಮಲpic.twitter.com/CO9fBia4Eg
‘ರಾಜ್ಯದ ಮೇಲೆ ರಾಜ್ಯ ಗೆಲ್ಲುತ್ತಿರುವ ಬಿಜೆಪಿ ಗೆಲುವಿನ ಗುಟ್ಟು ಈಗ ರಟ್ಟು. ಅಡ್ಡದಾರಿಯ ಕೊಚ್ಚೆಯಲ್ಲಿ ಅರಳುವ ಕಮಲವನ್ನು ಮುಡಿದುಕೊಂಡು ಬೀಗುವವರ ‘ಕಳ್ಳವೋಟಿನ ಕಥೆ’ ನಿಮ್ಮ ಮಾಜಿ ಶಾಸಕರೇ ಬಯಲು ಮಾಡಿದ್ದಾರೆ’ ಎಂದವರು ಹೇಳಿದ್ದಾರೆ.