ಕಲಬುರಗಿ: ಉಕ್ರೇನ್ನಲ್ಲಿ ಯುದ್ಧದ ಸನ್ನಿವೇಶದ ಬಗ್ಗೆ ಮಾಹಿತಿ ಇದ್ದರೂ ಭಾರತ ಸರ್ಕಾರ ತನ್ನ ರಾಜತಾಂತ್ರಿಕ ಸಂಬಂಧಗಳನ್ನು ಬಳಸಿಕೊಂಡು ಭಾರತೀಯ ವಿದ್ಯಾರ್ಥಿಗಳನ್ನು ವಾಪಸ್ ಕರೆತರುವಲ್ಲಿ ಆರಂಭದಲ್ಲೇ ಎಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.
ನಗರದಲ್ಲಿ ಭಾನುವಾರ ಯುನೈಟೆಡ್ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸ್ನೇಹವನ್ನು ಬಳಸಿಕೊಂಡು ಮುಂಚೆಯೇ ಅಗತ್ಯವಿರುವಷ್ಟು ವಿಮಾನಗಳನ್ನು ಕಳಿಸಿ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಕರೆಸಿಕೊಂಡಿದ್ದರೆ ಇಷ್ಟೊಂದು ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದರು.
ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ಗೆ ವಾಪಸಾಗುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಬ್ರಾಹಿಂ ಅವರು ಸದ್ಯಕ್ಕೆ ಬಾಡಿಗೆ ಮನೆಯಲ್ಲಿದ್ದಾರೆ. ಶೀಘ್ರವೇ ಸ್ವಂತ ಮನೆಗೆ ಮರಳಲಿದ್ದಾರೆ ಎಂದು ಜೆಡಿಎಸ್ಗೆ ಮರಳುವುದನ್ನು ಖಚಿತಪಡಿಸಿದರು.