‘ಕುಮಾರಸ್ವಾಮಿ ಅವರ ಜತೆಯಲ್ಲೇ ನಾನು ಕ್ಯಾಸಿನೋಗೆ ಹೋಗಿದ್ದೆ’ ಎಂಬ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರ ಹೇಳಿಕೆಗೆ ಭಾನುವಾರ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಈಗ ಡ್ರಗ್ಸ್ ದಂಧೆಯ ಕುರಿತು ತನಿಖೆ ನಡೆಯುತ್ತಿದೆ. ಅದಕ್ಕೂ ನಮ್ಮ ಶ್ರೀಲಂಕಾ ಪ್ರವಾಸಕ್ಕೂ ಸಂಬಂಧವಿಲ್ಲ. 14 ವರ್ಷಗಳ ಹಿಂದಿನ ವಿಷಯವನ್ನು ನಮ್ಮ ಹಳೆಯ ಸ್ನೇಹಿತರು ಏಕೆ ಪ್ರಸ್ತಾಪಿಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಿ’ ಎಂದರು.