ಬೆಂಗಳೂರು: ‘ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಅಧಿಕಾರದಿಂದ ದೂರ ಉಳಿಯಬಾರದೇಕೆ?’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ?’ ಎಂದು ಪ್ರಶ್ನಿಸಿದ್ದಾರೆ.
‘ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ’ ಎಂದಿದ್ದಾರೆ.
‘ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ. ಬಿಜೆಪಿಯಲ್ಲಿ ಸಿಎಂ ಆಗಬಲ್ಲ ನಾಯಕನೇ ಇಲ್ಲವಂತೆ...’ ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು’ ಎಂದು ಹೆಚ್ಡಿಕೆ ಆಗ್ರಹಿಸಿದ್ದಾರೆ.
‘ಕೋವಿಡ್, ಲಾಕ್ಡೌನ್ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು’ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರ ಹೇಳಿಕೆಗೆ ಟೀಕೆ: ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ’ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ ‘ಸಮಾಜ ಸುಧಾರಕರು’ ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ’ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ’ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
‘ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು.
ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ
ಮನೆಯೊಳಗೆ ರಜ ತುಂಬಿ
ಮನೆಯೊಳಗೆ ಮನೆಯೊಡೆಯನಿದ್ದಾನೊ
ಇಲ್ಲವೊ - ಕೂಡಲ ಸಂಗಮದೇವ
ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ "ಸಮಾಜ ಸುಧಾರಕರು" ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ.
— H D Kumaraswamy (@hd_kumaraswamy) June 17, 2021
5/8
ಇದನ್ನೂ ಓದಿ... ನಿಮಗೆ ವಯಸ್ಸಾಗಿಲ್ಲವೇ? ವಿಶ್ವನಾಥ್ಗೆ ರೇಣುಕಾಚಾರ್ಯ ತಿರುಗೇಟು
ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ.
— H D Kumaraswamy (@hd_kumaraswamy) June 17, 2021
3/8
"ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ ಸಿಎಂ ಆಗಬಲ್ಲ ನಾಯಕನೇ ಇಲ್ಲವಂತೆ..." ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು.
— H D Kumaraswamy (@hd_kumaraswamy) June 17, 2021
2/8
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.