ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಮನಗರ ಜಿಲ್ಲೆ ಮಾಡಿದ್ದು ನಾನು. 2006ರಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಹೈಟೆಕ್ ಆಸ್ಪತ್ರೆ, ನರ್ಸಿಂಗ್ ಕಾಲೇಜು ನಿರ್ಮಾಣಕ್ಕೆ ಚಾಲನೆ ನೀಡಿ ಹಣ ಬಿಡುಗಡೆ ಮಾಡಿದ್ದೆ. ಬಿಜೆಪಿ ಸರ್ಕಾರದಿಂದ ಕೆಲಸ ನಡೆಯಲಿಲ್ಲ. ಕಾಂಗ್ರೆಸ್ ಕೂಡ ಏನೂ ಮಾಡಲಿಲ್ಲ’ ಎಂದು ಟೀಕಿಸಿದರು.