ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಸಚಿವರ ಬಾಲಿಶ ಹೇಳಿಕೆ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

Last Updated 6 ಏಪ್ರಿಲ್ 2022, 20:08 IST
ಅಕ್ಷರ ಗಾತ್ರ

ಮೈಸೂರು: ‘ಬೆಂಗಳೂರಿನಲ್ಲಿ ನಡೆದ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಣ್ಣತನದ ಹೇಳಿಕೆ ನೀಡಿದ್ದಾರೆ. ಅವರು ಕಾಮೆಡಿಯನ್ ರೋಲ್ ಮಾಡ್ತಿದ್ದಾರಾ ಅಥವಾ ವಿಲನ್ ರೋಲ್ ಮಾಡ್ತಿದ್ದಾರಾ?’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಉರ್ದು ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಚೂರಿಯಲ್ಲಿ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ಪ್ರಚೋದನಕಾರಿ ಹೇಳಿಕೆ ಕೊಟ್ಟು, ನಂತರ ಸ್ಪಷ್ಟೀಕರಣ ನೀಡಿದ್ದಾರೆ. ಗೃಹ ಸಚಿವರಾದವರು ಹೀಗೆ ಹೇಳಿಕೆ ಕೊಟ್ಟರೆ ಹೇಗೆ? ಜವಾಬ್ದಾರಿ ಮರೆತು, ಸಮಾಜದ ಸ್ವಾಸ್ಥ್ಯ ಹಾಳುಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ಈಗ ಮಾವು ಮಾರಾಟಕ್ಕೆ ಗಲಾಟೆ ಶುರುವಾಗಿದೆ. ಮುಂದೆ ಹುಣಸೆ, ಸಪೋಟಕ್ಕೂ ಶುರುವಾಗಬಹುದು. ರೈತರು ಮಾವನ್ನು ಮುಸ್ಲಿಮರು, ಹಿಂದೂ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಾರೆ. ವಿಶ್ವ ಹಿಂದೂ ಪರಿಷತ್‌ನವರು ಬಂದು ವ್ಯಾಪಾರ ಮಾಡುತ್ತಾರಾ? ನೀವು ಬೇಕಾದರೆ ನಾಮ ಹಾಕಿಕೊಂಡು ಓಡಾಡಿ, ನಮ್ಮ ರೈತರಿಗೆ ನಾಮ ಹಾಕಲು ಬರಬೇಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT