ಮೇಕೆದಾಟು ವಿಚಾರದಲ್ಲಿ ರಾಜ್ಯ ಸರ್ಕಾರ ಬಿಜೆಪಿ ಹೈಕಮಾಂಡ್ ಹೇಳಿದಂತೆ ಕೇಳುತ್ತಿದೆ. ಬಿಜೆಪಿ ಯೋಜನೆಯ ವಿರುದ್ಧವಿದೆ. ಯೋಜನೆ ತಡೆಯಲು ತಮಿಳುನಾಡು ನಡೆಸುತ್ತಿರುವ ಸಾಂಘಿಕ ಹೋರಾಟದಂತೆ, ಯೋಜನೆ ಜಾರಿಗೆ ರಾಜ್ಯ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿಲ್ಲ. ಆದರೆ, ‘ಯೋಜನೆ ಜಾರಿ ಶತಸಿದ್ಧ’ ಎನ್ನುವ ಮೂಲಕ ಕನ್ನಡಿಗರ ಮೂಗಿಗೆ ತುಪ್ಪ ಸವರುತ್ತಿದೆ.2/7
ಹೆಚ್ಚುವರಿ ನೀರಿನ ಮೇಲೆ ಕಣ್ಣಿಟ್ಟು ತಮಿಳುನಾಡು 6 ತಿಂಗಳ ಹಿಂದೆ ನದಿ ಜೋಡಣೆ ಆರಂಭಿಸಿತು. ತಮಿಳುನಾಡಿನ ಈ ಯೋಜನೆ ವಿರುದ್ಧ ಕರ್ನಾಟಕ ಆಕ್ಷೇಪಣೆ ಸಲ್ಲಿಸಿದ್ದು ಮಾತ್ರ ನೆನ್ನೆ.ಈ ಹೆಚ್ಚುವರಿ ನೀರು ಈಗ ಡ್ಯಾಂ ನಿರ್ಮಾಣಕ್ಕೆ ತೊಡಕಾಗಿದೆ. ಇದರ ಆಧಾರದಲ್ಲಿ ರೂಪಿತವಾದ ನದಿ ಜೋಡಣೆ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ವಿಳಂಬ ಮಾಡಿತ್ತು.(4/7)