ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣದಿಂದ ರಮ್ಯಾ ಸ್ಪರ್ಧಿಸುವುದು ಮಾಧ್ಯಮ ಸೃಷ್ಟಿ: ನಿಖಿಲ್‌ 

Last Updated 14 ಫೆಬ್ರುವರಿ 2023, 13:12 IST
ಅಕ್ಷರ ಗಾತ್ರ

ಮಂಡ್ಯ: ‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧಿಸುತ್ತಾರೆ. ಜನರ ಇಚ್ಛೆಯಂತೆ ನಾನು ರಾಮನಗರ ಕ್ಷೇತ್ರದಿಂದ ನಿಲ್ಲುತ್ತೇನೆ’ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮಂಗಳವಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ನಟಿ ರಮ್ಯಾ ಸ್ಪರ್ಧಿಸುತ್ತಾರೆ ಎಂಬುದು ಮಾಧ್ಯಮ ಸೃಷ್ಟಿ. ನನ್ನ ಪ್ರಕಾರ ಅವರು ಸ್ಪರ್ಧಿಸುವುದಿಲ್ಲ’ ಎಂದರು.

‘ರಾಜ್ಯದಾದ್ಯಂತ ಕುಮಾರಣ್ಣ ಅವರ ಏಕಾಂಗಿ ಹೋರಾಟಕ್ಕೆ ಯುವಕರನ್ನು ಸಂಘಟಿಸಲು ನಾನೂ ಪ್ರವಾಸ ಮಾಡುತ್ತೇನೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮಂಡ್ಯ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತರೊಬ್ಬರನ್ನು ನಿಲ್ಲಿಸಿ, ಗೆಲ್ಲಿಸಿಕೊಂಡು ಬರುತ್ತೇವೆ’ ಎಂದರು.

‘ನನ್ನನ್ನು ಅಪಕ್ವ ಎಂದಿದ್ದ ಮಹಾತಾಯಿ ಬಗ್ಗೆ ಮಾತನಾಡುವುದಿಲ್ಲ. ಅವರನ್ನು ಗೆಲ್ಲಿಸಿದ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ’ ಎಂದು ಸಂಸದೆ ಸುಮಲತಾ ಅವರನ್ನು ಪರೋಕ್ಷವಾಗಿ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT