‘ಸ್ಫೋಟ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಪ್ರಕರಣದ ಹಿಂದೆ ಸಮಾಜಘಾತುಕ ಶಕ್ತಿಗಳಿದ್ದು, ಕಠಿಣ ಕ್ರಮ ವಹಿಸಬೇಕು. ಪೊಲೀಸರಿಗೆ ಮುಕ್ತ ಅವಕಾಶ ನೀಡಿ ಯಾವುದೇ ಸಂಘಟನೆ ಇದ್ದರೂ ಪತ್ತೆ ಹಚ್ಚಬೇಕು. ಈಗಿನ ಪ್ರಕರಣದಲ್ಲಿ ದೇವರೇ ಆ ಭಾಗದ ಜನರನ್ನು ಕಾಪಾಡಿದ್ದಾನೆ’ ಎಂದು ಹೇಳಿದರು.
‘ಯಾವುದೇ ಪಕ್ಷ, ಸಮುದಾಯಗಳಿರಲಿ ನಮ್ಮ ಜವಾಬ್ದಾರಿ ನಾಡಿನ ಜನತೆಗೆ ಸಂಪೂರ್ಣ ರಕ್ಷಣೆ ನೀಡುವುದು, ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಿಸುವುದು ಆಗಬೇಕು. ಪಕ್ಷಗಳ ಅಂಗ ಪಕ್ಷಗಳು, ಸಂಘಟನೆಗಳು, ಬೇರೆ ಸಮುದಾಯದ ಸಂಘಟನೆಗಳು ಮತ್ತು ಅಲ್ಲಿನ ಧಾರ್ಮಿಕ ಗುರುಗಳು ಇಂಥ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬಾರದು’ ಎಂದು ಮನವಿ ಮಾಡಿದರು.