ಮೆರವಣಿಗೆಯಿಂದಾಗಿ ಇಡೀ ಮಾಗಡಿಯಲ್ಲಿ ವಾಹನ ಸಂದಣಿ ಉಂಟಾಗಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಮೆರವಣಿಗೆಯಲ್ಲಿ ಕುಮಾರಸ್ವಾಮಿ ಅವರೊಂದಿಗೆ ಶಾಸಕ ಎ.ಮಂಜುನಾಥ, ಜೆಡಿಎಸ್ ರಾಜ್ಯ ಘಟದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಸಾಥ್ ನೀಡಿದರು.