‘ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇದು ಬಿಜೆಪಿಯ ಹಿರಿಯರಿಗೆ ಮಾಡಿದ ಅವಮಾನ. ಬೆಂಗಳೂರು ಎಂದರೆ ಬಿಬಿಎಂಪಿ, 28 ವಿಧಾನಸಭೆ ಕ್ಷೇತ್ರ, ನಾಲ್ಕು ಲೋಕಸಭಾ ಕ್ಷೇತ್ರಗಳು ಮಾತ್ರವಲ್ಲ. ಬೆಂಗಳೂರು ನಮ್ಮ ಹೆಮ್ಮೆ. ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನು ಅವಮಾನಿಸುವುದು ಕ್ಷುಲ್ಲಕ ಕೃತ್ಯ. ಸಂಬಂಧಿಸಿದವರಿಂದ ಬಿಜೆಪಿ ಕ್ಷಮೆ ಕೇಳಿಸಬೇಕು’ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.